Sunday 23 August 2015

~: ಧರ್ಮ ಮತ್ತು ಸಂಸ್ಕಾರ :~

~: ಧರ್ಮ ಮತ್ತು ಸಂಸ್ಕಾರ :~
ಹಲವಾರು ಸಂಸ್ಕಾರಗಳಲ್ಲಿ ದೀಕ್ಷಾಸಂಸ್ಕಾರವು ಅತಿ ಪ್ರಾಮುಖ್ಯವಾದ ಪ್ರಸಂಗ. ಕೇವಲ ಮಾನವನಿಗಲ್ಲದೆ ಇತರ ವಸ್ತುಗಳಿಗೂ ಸಂಸ್ಕಾರ ಬೇಕೆಂಬುದನ್ನು ನೋಡುವಾ.
ಮಣ್ಣಿಗೆ ಸಂಸ್ಕಾರ ಕೊಟ್ಟರೆ ಮಡಿಕೆಯಾಗುವದು.
ಗೋವಿನ ಸಗಣಿಗೆ ಸಂಸ್ಕಾರ ಕೊಟ್ಟರೆ ಭಸಿತವಾಗುವದು.
ಕಬ್ಬಿನ ಸಿಪ್ಪೆಗೆ ಸಂಸ್ಕಾರ ಕೊಟ್ಟರೆ ಕಾಗದವಾಗುವದು,
ಹಾಲಿಗೆ ಸಂಸ್ಕಾರ ಕೊಟ್ಟರೆ ತುಪ್ಪವಾಗುವದು.
ಗೋಧಿಗೆ ಸಂಸ್ಕಾರ ಕೊಟ್ಟರೆ ಪಾಯಸವಾಗುವದು,
ಭತ್ತಕ್ಕೆ ಸಂಸ್ಕಾರ ಕೊಟ್ಟರೆ ಅನ್ನವಾಗುವದು,
ಜಲಕ್ಕೆ ಸಂಸ್ಕಾರ ಕೊಟ್ಟರೆ ಪಾದೋದಕವಾಗುವದು,
ತಿನ್ನುವ ಪದಾರ್ಥಕ್ಕೆ ಸಂಸ್ಕಾರ ಕೊಟ್ಟರೆ ಪ್ರಸಾದವಾಗುವದು,
ಶಬ್ದಕ್ಕೆ ಸಂಸ್ಕಾರ ಕೊಟ್ಟರೆ ಮಂತ್ರವಾಗುವದು,
ಕಲ್ಲಿಗೆ ಸಂಸ್ಕಾರ ಕೊಟ್ಟರೆ ವಿಗ್ರಹವಾಗುವದು,
ಶಿಲೆಗೆ ಸಂಸ್ಕಾರ ಕೊಟ್ಟರೆ ಲಿಂಗವಾಗುವುದು.
ಅದರಂತೆ, ಭವಿಗೆ ಲಿಂಗದೀಕ್ಷಾ ಸಂಸ್ಕಾರ ಕೊಟ್ಟರೆ ಭಕ್ತನಾಗುವನು. ಜೀವನಿಗೆ ಲಿಂಗದೀಕ್ಷಾ ಸಂಸ್ಕಾರ  ಕೊಟ್ಟರೆ ಶಿವರೂಪನಾಗುವನು. ನರನಿಗೆ ಲಿಂಗದೀಕ್ಷಾ ಸಂಸ್ಕಾರ ಕೊಟ್ಟರೆ ಹರರೂಪನಾಗುವನು.
~: ಸದ್ಗುರು ಸ್ವಾಮಿ ಲಿಂಗಾನಂದರು :~
 
For More
~: ಆದರ್ಶ ಶಿಕ್ಷಣ :~ http://linganandaswamiji.blogspot.com/2015/08/blog-post_61.html

~: ಎನ್ನ ತನ್ನಂತೆ ಮಾಡಿದ ಗುರು :~ http://linganandaswamiji.blogspot.com/2015/08/blog-post.html

~: ಧರ್ಮ ಮತ್ತು ಸಂಸ್ಕಾರ :~ http://linganandaswamiji.blogspot.com/2015/08/blog-post_59.html

~: ಗುರು ಅನುಗ್ರಹ :~ http://linganandaswamiji.blogspot.com/2015/08/blog-post_24.html

~: ಅಕ್ಕ ಕೇಳವ್ವ, ನಾನೊಂದು ಕನಸ ಕಂಡೆ :~ http://linganandaswamiji.blogspot.com/2015/08/blog-post_23.html

~: ಲಿಂಗದೀಕ್ಷೆಯ ಬಗ್ಗೆ ತಪ್ಪು ಕಲ್ಪನೆ :~ http://linganandaswamiji.blogspot.com/2015/08/blog-post_27.html


No comments:

Post a Comment